ರಾಯಚೂರು

ಬಿಜೆಪಿ ಗೆಲುವು ಮುಂದಿನ ಚುನಾವಣೆಗೆ ಬುನಾದಿ : ವಜ್ಜಲ್

ಲಿಂಗಸುಗೂರು : ತಾಲೂಕಿನ ಹೆಚ್ಚಿನ ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವನ್ನು ಸಾಧಿಸುವ ಮೂಲಕ ಬರುವ ವಿಧಾನಸಭಾ ಚುನಾವಣೆಗೆ ಬುನಾದಿ ಹಾಕಿದಂತಾಗಿದೆ ಎಂದು ಮಾಜಿ ಶಾಸಕ ಹಾಗೂ ಹಟ್ಟಿ ಚಿನ್ನದಗಣಿ ಅದ್ಯಕ್ಷ ಮಾನಪ್ಪ ವಜ್ಜಲ್ ಭರವಸೆ ವ್ಯಕ್ತಪಡಿಸಿದರು.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರಕಾರದ ಜನಪರ ಕಾರ್ಯಗಳು ನಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾರಣವಾಗಿದೆ. ಅಲ್ಲದೇ, ಕಳೆದ ಎರಡು ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಸಲ್ಲಿಸಿದ ನಮ್ಮ ಸೇವೆಯನ್ನೂ ಮತದಾರರು ಪರಿಗಣಿಸಿರುವುದು ಅಭಿನಂದನಾರ್ಹ. ಸುಮಾರು 20 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿರುವುದು ಬಿಜೆಪಿ ಪಕ್ಷ ಕ್ಷೇತ್ರದಲ್ಲಿ ಸಂಘಟನಾತ್ಮಕವಾಗಿ ಗಟ್ಟಿಗೊಳ್ಳುತ್ತಿರುವುದಕ್ಕೆ ಸಾಕ್ಷಿಯಾಗಿದೆ.

ನಮ್ಮ ಪಕ್ಷ ಬೆಂಬಲಿಸಿದ್ದ ಅಭ್ಯರ್ಥಿಗಳ ಬೆನ್ನಿಗೆ ನಿಂತು ಆಶೀರ್ವದಿಸಿದ ಮತದಾರರ ಪ್ರಭುಗಳಿಗೆ ಚಿರರುಣಿಯಾಗಿದ್ದೇವೆ. ಬರುವ ದಿನಗಳಲ್ಲಿ ಪಂಚಾಯತ್‍ಗಳ ಅಭಿವೃದ್ಧಿಗೆ ಅವಿರತವಾಗಿ ಶ್ರಮಿಸುವ ಮೂಲಕ ಮಾದರಿ ಆಡಳಿತಕ್ಕೆ ನಾಂದಿ ಹಾಡಲಾಗುವುದೆಂದು ವಜ್ಜಲ್ ಹೇಳಿದರು.

Leave a Reply

Your email address will not be published. Required fields are marked *

error: Content is protected !!